Thursday, April 25, 2019

METHOD OF MEAL ( ಊಟದ ಪದ್ಧತಿ )

                                                                                                                                           ಸಂಗ್ರಹಿತ
ಸನಾತನರ  ಊಟದ ಪದ್ಧತಿ 
ತಟ್ಟೆಯನ್ನು ತೊಡೆಯ ಮೇಲೆ ಇಟ್ಟುಕೊಂಡು ಏಕೆ ಊಟವನ್ನು ಮಾಡಬಾರದು?

೧. ಅನ್ನವು ‘ಪೂರ್ಣಬ್ರಹ್ಮ’ವಾಗಿರುವುದರಿಂದ ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ ಮಾಡಿದರೆ ಅನ್ನದಲ್ಲಿನ ದೇವತ್ವಕ್ಕೆ ಅಗೌರವ ತೋರಿದಂತಾಗಿ ಅನ್ನಬ್ರಹ್ಮದಲ್ಲಿನ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ.

೨. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಅನ್ನವನ್ನು ಸೇವಿಸಿದರೆ, ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವದ ಅಂತರ್ಮನಸ್ಸಿನ ವಾಸನೆಯ ವಿಚಾರಗಳಿಗನುಸಾರ ಪ್ರಕ್ಷೇಪಿತವಾಗುವ ಲಹರಿಗಳು ಅನ್ನದ ಮೂಲಕ ದೇಹದಲ್ಲಿ ಸಂಕ್ರಮಿತವಾಗುತ್ತವೆ. ಈ ಪ್ರಕ್ರಿಯೆಯಲ್ಲಿ ಜೀವವು ತನ್ನ ರಜ-ತಮಾತ್ಮಕ ಲಹರಿಯುಕ್ತ ಕೋಶದಲ್ಲಿ ಅನ್ನವನ್ನಿಟ್ಟು ಕೊಂಡು ಸೇವಿಸುತ್ತಿರುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗುವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.

೩. ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಊಟವನ್ನು ಮಾಡುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸುಪ್ತವಾಗಿರುವ ಸ್ಪಂದನಗಳು ಕಾರ್ಯ
ನಿರತವಾಗಿ ಅನ್ನವು ಅಪವಿತ್ರವಾಗಬಹುದು, ಆದುದರಿಂದ ಊಟದ ತಟ್ಟೆಯನ್ನು ತೊಡೆಗಳ ಮೇಲೆ ಇಟ್ಟುಕೊಂಡು ಊಟವನ್ನು ಮಾಡಬಾರದು.
ಊಟ ಮಾಡುವ ವ್ಯಕ್ತಿಯು ಉಪಸ್ಥಿತ ಇಲ್ಲದಿದ್ದರೆ ತಟ್ಟೆಯಲ್ಲಿ ಅನ್ನವನ್ನು ಏಕೆ ಬಡಿಸಿಡಬಾರದು?
ಅನ್ನವನ್ನು ಬಡಿಸಿದ ತಟ್ಟೆಯಲ್ಲಿನ ಅನ್ನದ ಗಂಧ (ವಾಸನೆ) ಮತ್ತು ಆಪಲಹರಿಗಳ ಆಕರ್ಷಣೆ
ಯಿಂದ ಯಾವುದಾದರೊಂದು ಕೆಟ್ಟ ಶಕ್ತಿಯ ವಾಸನೆಯು ಜಾಗೃತವಾಗಿ ಅದು ಆ ಸ್ಥಳದಲ್ಲಿ ಅನ್ನವನ್ನು ಸ್ವೀಕರಿಸಲು ಬರುವ ಸಾಧ್ಯತೆಯಿರುವುದರಿಂದ ಊಟವನ್ನು ಮಾಡುವ ವ್ಯಕ್ತಿಯು ಉಪಸ್ಥಿತನಿಲ್ಲದಿದ್ದಾಗ ಅವನಿಗೆ ತಟ್ಟೆಯಲ್ಲಿ ಅನ್ನವನ್ನು ಬಡಿಸಿ ಇಡಬಾರದು. ಓರ್ವ ವ್ಯಕ್ತಿಯು ಊಟಕ್ಕೆ ಕುಳಿತಾಗ ಅನ್ನದ ಗಂಧ (ವಾಸನೆ) ಮತ್ತು ಆಪಲಹರಿಗಳ ಪ್ರಕ್ಷೇಪಣೆ ಆಗುವುದಿಲ್ಲವೇನು? ಓರ್ವ ವ್ಯಕ್ತಿಯು ಮಣೆಯ ಮೇಲೆ ಊಟಕ್ಕೆ ಕುಳಿತಾಗಲೂ ಕೆಟ್ಟ ಶಕ್ತಿಯು ಆಕರ್ಷಿತ ವಾಗಬಹುದೇನು?
ವ್ಯಕ್ತಿಯು ಮಣೆಯ ಮೇಲೆ ಕುಳಿತು ಕೊಳ್ಳುವುದೆಂದರೆ ಪ್ರತ್ಯಕ್ಷ ಕರ್ತಾತ್ಮಕ ಸ್ವರೂಪದಿಂದ ಉತ್ಪನ್ನವಾಗಿರುವ ಭೋಗಿಸಲು ನಿರ್ಮಾಣವಾದ ರೂಪವೇ ಆಗಿದೆ. ಆದುದರಿಂದ ಅನ್ನದಿಂದ ಪ್ರಕ್ಷೇಪಿತವಾಗುವ ಗಂಧ ಮತ್ತು ಆಪತತ್ತ್ವಾತ್ಮಕ ಲಹರಿಗಳ ಪ್ರಕ್ಷೇಪಣೆಯು ಹೆಚ್ಚಿನ ಪ್ರಮಾಣದಲ್ಲಿ ಊರ್ಧ್ವ ದಿಕ್ಕಿನೆಡೆಗೆ ಆಗದೇ, ಜೀವದ ಪ್ರತ್ಯಕ್ಷ ವಾಸನೆಯ ಬಲದಿಂದ ನಿರ್ಮಾಣವಾದ ಭೋಗಾಸಕ್ತ ಕೃತಿಯ ಕಡೆಗೆ ಆಗುತ್ತದೆ. ಆದುದರಿಂದ ತಟ್ಟೆಯಲ್ಲಿ ಬಡಿಸಿರುವ ಅನ್ನದಿಂದ ಪ್ರಕ್ಷೇಪಿತವಾಗುವ ಗಂಧ ಮತ್ತು ಆಪತತ್ತ್ವಾತ್ಮಕ ಲಹರಿಗಳು ಅತ್ಯಲ್ಪ ಪ್ರಮಾಣದಲ್ಲಿ ಊರ್ಧ್ವ ದಿಕ್ಕಿಗೆ ಹೋಗುತ್ತವೆ. ಈ ಲಹರಿಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿರುವುದರಿಂದ ಕೆಟ್ಟ ಶಕ್ತಿಗಳ ವಾಸನೆ ಜಾಗೃತವಾಗುವುದು ಹೆಚ್ಚುಕಡಿಮೆ ಅಸಾಧ್ಯವೇ ಆಗಿದೆ.
ಕೆಲವೊಮ್ಮೆ ವ್ಯಕ್ತಿಗೆ ತೊಂದರೆಗಳನ್ನು ಕೊಡಲು ದೊಡ್ಡ ಕೆಟ್ಟ ಶಕ್ತಿಗಳು ಅನ್ನದ ಮಾಧ್ಯಮದಿಂದ ವ್ಯಕ್ತಿಯ ಕಡೆಗೆ ಆಕರ್ಷಿತವಾಗುತ್ತವೆ. ಹಿಂದೂ ಸಂಸ್ಕೃತಿಯಂತೆ ತಟ್ಟೆಯ ಸುತ್ತಲೂ ನೀರಿನ ಮಂಡಲವನ್ನು ಹಾಕಿ, ಆಪತತ್ತ್ವಾತ್ಮಕ ಕವಚ ವನ್ನು ನಿರ್ಮಾಣ ಮಾಡಿ ಅನ್ನವನ್ನು ಸ್ವೀಕರಿಸುವ ವ್ಯಕ್ತಿಗೆ, ಇತರ ವ್ಯಕ್ತಿಗಳ ತುಲನೆ. ಯಲ್ಲಿ ಮೈಯಲ್ಲಿ ಸೇರುವುದು ಅಥವಾ ವ್ಯಕ್ತಿಯ ಮೇಲೆ ಹಿಡಿತ ಸಾಧಿಸಲು ಕೆಟ್ಟ ಶಕ್ತಿಗಳಿಗೆ ಶೇ.೨೦ರಷ್ಟು ಹೆಚ್ಚು ಕಠಿಣ ವಾಗಿರುತ್ತದೆ.


No comments:

Post a Comment