Friday, July 24, 2020

BRUHATI SAHASRA (ಬೃಹತಿ ಸಹಸ್ರ - ವಿಷ್ಣುಸಹಸ್ರನಾಮ)

ಬೃಹತಿ - ವಿಷ್ಣುಸಹಸ್ರನಾಮ
ವಿಷ್ಣು ಸಹಸ್ರನಾಮದ ಮಹತ್ವ ತಿಳಿಸಿದ ಭೀಷ್ಮ
ಮನುಷ್ಯನ ಆಯಸ್ಸು ನೂರು ವರ್ಷ ಎಂದು ಗೃಹಿತ .ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.                                                                                       

ವೇದಗಳ ಸಾರವಾದ ಬೃಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬೃಹತಿ ಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ. 

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ. ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ.

ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ ‘ಇಡೀ ಜಗತ್ತಿನ ದೈವ ? ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ನಮಗೆ ಶ್ರೇಯಸ್ಸಾಗುತ್ತದೆ ? ಸಮಸ್ತ ಧರ್ಮಗಳಲ್ಲಿ ಶ್ರೇಷ್ಠ ಧರ್ಮ ಯಾವುದು? ಯಾರ ಜಪ ಮಾಡುವುದರಿಂದ ಸಮಸ್ತ ಪಾಪ ಜನನ-ಮರಣಗಳ ಚಕ್ರದಿಂದ ಮುಕ್ತರಾಗಬಹುದು’? ಈ ಎಲ್ಲ ಪ್ರಶ್ನೆಗಳಿಗೂ ಭೀಷ್ಮಾಚಾರ್ಯರು  ಶ್ರೀ ವಿಷ್ಣು ಸಹಸ್ರನಾಮವೆಂದು ಒಂದೇ ಉತ್ತರ ಹೇಳುತ್ತಾರೆ. ಅದಕ್ಕೆ ತಮ್ಮ ಜೀವನದ ಪ್ರಸಂಗವೊಂದನ್ನು ಈ ರೀತಿಯಾಗಿ ವಿವರಿಸುತ್ತಾರೆ. 

ನಿಮ್ಮನ್ನು ನಾಶಮಾಡಲೆಂದೇ ದುರ್ಯೋಧನನು ಅರಗಿನ ಅರಮನೆಯಲ್ಲಿ ಅವರು ಉಳಿಯುವಂತೆ ಮಾಡಿ ರಾತ್ರಿಯಲ್ಲಿ ಅದಕ್ಕೆ ಬೆಂಕಿ ಇಡಿಸಿದ್ದ. ಆದರೆ ವಿದುರನ ದೂರದೃಷ್ಟಿ ನಿಮ್ಮನ್ನೇನೋ ಮೃತ್ಯುದವಡೆಯಿಂದ ಪಾರಾಗಿಸಿತ್ತು. ನಿಮಗೆ ಏನು ಆಗಿಲ್ಲವೆಂದು 
ತಿಳಿದು  ಎಲ್ಲಕ್ಕಿಂತ ಹೆಚ್ಚು ಸಂತೋಷವಾಗಿದ್ದು ನನಗೆ ಸಂತೋಷವಿರಲಿ ದುಃಖವಿರಲಿ ಅದನ್ನು ತಾಯಿ ಗಂಗಾ ಮಾತೆಯೊಡನೆ ಹಂಚಿಕೊಳ್ಳುವುದು ನನಗೆ ಅತ್ಯಂತ ಖುಷಿಯ ಸಂಗತಿಯಾಗಿತ್ತು.

ಹೀಗೇ ಒಂದು ಮುಂಜಾನೆ ಕೈಯಲ್ಲೊಂದು ಊರುಗೋಲು ಹಿಡಿದು ತಾಯಿ ಮಡಿಲೆಡೆಗೆ ಸಾಗುತ್ತಿದ್ದ ನನಗೆ ಮನಸಿನ ತುಂಬಾ ನೀವುಗಳೆ ಆವರಿಸಿಬಿಟ್ಟಿದ್ದಿರಿ . ನೀವು ಅನುಭವಿಸಿದ ಕಷ್ಟಕ್ಕೆ ಮರುಗುತ್ತ ಹೆಜ್ಜೆಹಾಕುತ್ತಿದ್ದ ನಾನು ಊರಿ ನಡೆಯುತ್ತಿದ್ದ ಕೋಲಿನ ತುದಿಗೆ ಆಕಸ್ಮಿಕವಾಗಿ ಓತಿಕ್ಯಾತವೊಂದು ಸಿಲುಕಿ ನರಳಿತು

 ತನ್ನ ಆಲೋಚನಾಸರಣಿಗೆ ಭಂಗವಾಗಿದ್ದಕ್ಕೆ ಗೊಣಗಿದ ನಾನು ಕೋಲಿಗೆ ಸಿಲುಕಿದ ಆ ಓತಿಕ್ಯಾತವನ್ನು ಬೀಸಿ ಎಸೆದು ಮುಂದೆ ನಡೆದರು. ಮುಳ್ಳುಪೊದೆಯ ಮೇಲೆ ಬಿದ್ದ ಅದು ರೋದಿಸುತ್ತ, ‘ಅಯ್ಯಾ! ಮಹಾನುಭಾವರೇ, ಸ್ವಲ್ಪ ನಿಲ್ಲಿ. ನನ್ನನ್ನು ಬೀಸಿ ಎಸೆದು ಸಂಬಂಧವೇ ಇಲ್ಲದಂತೆ ಹೋಗುತ್ತಿದ್ದೀರಲ್ಲ, ಇದು ಸರಿಯೇ?’ ಎಂದಾಗ ನಾನು ‘ಇದರಲ್ಲಿ ನನ್ನದೇನು ತಪ್ಪಿದೆ? ನನ್ನ ಕೋಲಿಗೆ ಸಿಲುಕಿದ್ದು ನೀನೇ ತಾನೆ?!’

 ಎಂದಾಗ ‘ಹೌದು! ಸಿಲುಕಿದ್ದು ನಾನೇ. ಆದರೆ ನರಳುತ್ತಿದ್ದ ನನ್ನ ಸ್ಥಿತಿಯನ್ನು ನೋಡಿಯೂ ಮುಳ್ಳಿನ ಪೊದೆಯ ಮೇಲೆ ಎಸೆದಿರಲ್ಲ, ಇದು ನೀವು ತಿಳಿದೂ ಮಾಡಿದ ತಪ್ಪಲ್ಲವೇ? ಹಾಗಾಗಿ ನೀವೂ ನಿಮ್ಮ ಅಂತ್ಯಕಾಲಕ್ಕೆ ಶರಶಯ್ಯೆಯಲ್ಲಿ ನನ್ನಂತೆ ನರಳಿ ಸಾಯುವಂತಾಗಲಿ’ ಎಂದು ಶಪಿಸಿತು. ನನಗೆ ಆಗ ನನ್ನ ತಪ್ಪಿನ ಅರಿವಾಗಿತ್ತು. ಕ್ಷಮೆ ಬೇಡುತ್ತ ಆ ಮುಳ್ಳಿನ ಬೇಲಿಯಿಂದ ಓತಿಕ್ಯಾತವನ್ನು ಮೇಲೆತ್ತಿ ಕಾಪಾಡಲು ಧಾವಿಸಿದರು. ಆದರೆ ಕಾಲ ಮಿಂಚಿತ್ತು. ರಕ್ತಸ್ರಾವಗೊಂಡ ಅದು ಅದಾಗಲೇ ಪ್ರಾಣ ಬಿಟ್ಟಿತು! 

ಭೀಷ್ಮಾಚಾರ್ಯರಿಗೆ ವಿಷ್ಣುಸಹಸ್ರನಾಮದ ಶಕ್ತಿ ಸ್ವಯಂ ವೇದ್ಯವಾಗಿತ್ತು. ಅವರು ಮೃತ್ಯುವನ್ನೂ ಸಹ ಆ ಶಕ್ತಿಯಿಂದ ದೂರ ಇಟ್ಟಿದ್ದರು. ಅಷ್ಟೇ ಅಲ್ಲ ಅವರ ಭಕ್ತಿಯ ಶಕ್ತಿಯಿಂದ ಶ್ರೀ ಕೃಷ್ಣ ಪರಮಾತ್ಮ ಅವರು ಮಲಗಿದ್ದ ಕಡೆಗೆ ಬಂದು ದರ್ಶನ, ಸ್ಪರ್ಶನ ಭಾಗ್ಯನೀಡಿದ. ಭೀಷ್ಮಾಚಾರ್ಯರು ಹೇಳುತ್ತಾರೆ. ‘ನ ವಾಸುದೇವ ಭಕ್ತಾನಾಮ್ ಅಶುಭಂ ವಿದ್ಯತೇಕ್ಪಚಿತ್’ ಇದನ್ನು ಪಾರಾಯಣ ಮಾಡುವವರು, ಪರಿಹರಿಸಲಾಗದ ಪರಿಪರಿಯ ಕಷ್ಟಗಳಿಂದ ಬಿಡುಗಡೆ ಹೊಂದುತ್ತಾರೆ. ಅಷ್ಟೇ ಅಲ್ಲ, ವಾಸುದೇವನ ಭಕ್ತರಿಗೆ ಅಶುಭವೆಂಬುದೇ ಇರುವುದಿಲ್ಲ. ಅವರಿಗೆ ಅಪಮೃತ್ಯು, ಮರಣ, ಮುಪ್ಪು ಹಾಗೂ ರೋಗಗಳ ಭಯವಿರುವುದಿಲ್ಲ.

No comments:

Post a Comment