Tuesday, October 01, 2024

Narasimha Suladi ನರಸಿಂಹ ಸೂಳಾದಿ

                       ಶ್ರೀ ನರಸಿಂಹ ಸೂಳಾದಿ


ರಾಗ – ನಾಟಿ ತಾಳ – ಧ್ರುವ

ವೀರ ಸಿಂಹನೆ ನಾರಸಿಂಹನೆ ದಯ ಪಾರಾವಾರನೆ ಭಯ ನಿವಾರಣ ನಿರ್ಗುಣಸಾರಿದವರ ಸಂಸಾರ ವೃಕ್ಷದ ಮೂಲಬೇರರಿಸಿ ಕೀಳುವ ಬಿರಿದು ಭಯಂಕರ ಘೋರವತಾರ ಕರಾಳವದನ ಅ-ಘೋರ ದುರಿತ ಸಂಹಾರ ಮಾಯಾಕಾರಕ್ರೂರದೈತ್ಯರ ಶೋಕ ಕಾರಣ ಉದುಭವಈರೇಳು ಭುವನ ಸಾಗರದೊಡೆಯ. ಅರೌದ್ರನಾಮಕ ವಿಜಯ ವಿಠ್ಠಲ ನರಸಿಂಗವೀರರ ಸಾತುಂಗ ಕಾರುಣ್ಯಪಾಂಗ || ೧ ||

ತಾಳ – ಮಟ್ಟ

ಮಗುವನು ರಕ್ಕಸನು ಹಗಲಿರುಳು ಬಿಡದೆಹಗೆಯಿಂದಲಿ ಹೊಯ್ದು ನಗಪನ್ನಗ ವನಧಿಗಗನ ಮಿಗಿಲಾದ ಅಗಣಿತ ಬಾಧಿಯಲಿನೆಗೆದು ಒಗದು ಸಾವು ಬಗೆದು ಕೊಲ್ಲುತಿರಲು ಹೇಜಗದ ವಲ್ಲಭನೇ ಸುಗುಣಾನಾದಿ ಗನೆನಿಗಮಾ ವಂದಿದತೆ ಪೊಗಳಿದ ಭಕುತರತಗಲಿ ತೊಲಗನೆಂದೂ ಮಿಗೆ ಕೂಗುತಲಿರಲುಯುಗ ಯುಗದೊಳು ದಯಾಳುಗಳ ದೇವರದೇವಯುಗಾದಿ ಕೃತನಾಮಾ ವಿಜಯ ವಿಠ್ಠಲ ಹೋ ಹೋಯುಗಳ ಕರವ ಮುಗಿದು ಮಗುವು ಮೊರೆ ಇಡಲು || ೨ ||

ತಾಳ – ರೂಪಕ

ಕೇಳಿದಾಕ್ಷಣದಲಿ ಲಾಲಿಸಿ ಭಕ್ತನ್ನ ಮೌಳಿ ವೇಗದಲಿ ಪಾಲಿಸುವೆನೆಂದುತಾಳಿಸಂತೋಷವ ತೂಳಿ ತುಂಬಿದಂತೆಮೂಲೋಕದಪತಿವಾಲಯದಿಂದ ಸುಸ್ತೀಲ ದುರ್ಲಭ ನಾಮ ವಿಜಯ ವಿಠ್ಠಲ ಪಂಚಮೌಳಿ ಮಾನವ ಕಂಭ ಸೀಳಿ ಮೂಡಿದ ದೇವ || ೩ ||

ತಾಳ – ಝಂಪೆ

ಲಟಲಟಾ ಲಟಲಟಾ ಲಟಕಟಿಸಿ ವನಜಾಂಡಕಟಹ ಪಟ ಪಟ ಪುಟುತ್ಕಟದಿ ಬಿಚ್ಚುತಲಿರಲುಪುಟ ಪುಟ ಪುಟನೆಗೆದು ಚೀರಿಹಾರುತ್ತ ಪ-ಲ್ಕಟಾಕಟಾ ಕಟ ಕಡಿದು ರೋಷದಿಂದಮಿಟಿ ಮಿಟಿ ಮಿಟನೆ ರಕ್ತಾಕ್ಷಿಯಲ್ಲಿ ನೋಡಿತಟಿತ್ಕೋಟಿ ಊರ್ಭಟಗೆ ಅರ್ಭಟವಾಗಿರಲುಕುಟಿಲ ರಹಿತ ವ್ಯಕ್ತ ವಿಜಯ ವಿಠ್ಠಲ ಶಕ್ತದಿಟಿ ನಿಟಿಲ ನೇತ್ರ ಸುರಕಟಕ ಪರಿಪಾಲಾ || ೪ ||

ತಾಳ – ತ್ರಿವಿಡಿ

ಬೊಬ್ಬಿರಿಯೇ ವೀರ ಧ್ವನಿಯಿಂದ ತನಿಗಿಡಿಹಬ್ಬಿ ಮುಂಚೋಣಿ ಉರಿ ಹೊರಗೆದ್ದು ಸುತ್ತೆಉಬ್ಬಸ ರವಿಗಾಗೆ ಅಬ್ಜ ನಡುಗುತಿರೆಅಬ್ಧಿಸಪುತ ಉಕ್ಕಿ ಹೊರಚೆಲ್ಲಿ ಬರುತಿರೆಅಬುಜ ಭವಾದಿಗಳು ತಬ್ಬಬ್ಬಿ ಗೊಂಡಾರಿಅಬ್ಬರವೇನೆನುತ ನಭದ ಗೂಳೆಯು ತಗೆಯೆಶಬ್ದ ತುಂಬಿತು ಅವ್ಯಾಕೃತಾಕಾಶ ಪರಿಯಂತನಿಬ್ಬರ ತರುಗಿರಿ ಝರಿ ಝರಿಸಲು ಒಬ್ಬರಿಗೊಶವಲ್ಲದ ನಮ್ಮಾ ವಿಜಯ ವಿಠ್ಠಲ ಇಬ್ಬಗೆಯಾಗಿ ಕಂಭದಿಂದ ಪೊರಮಟ್ಟಾ || ೫ ||

ತಾಳ – ಅಟ್ಟ

ಘಡಿಘಡಿಸುತ ಕೋಟಿ ಸಿಡಿಲು ಗಿರಿಗೆ ಬಂದುಹೊಡೆದಂತೆ ಚೀರಿ ಬೊಬ್ಬಿಡುತಲಿ ಲಂಘಿಸಿಹಿಡಿದು ರಕ್ಕಸನ್ನ ಕೆಡಹಿ ಮಡುಹಿ ತುಡುಕಿತೊಡೆಯ ಮೇಲಿರಿಸಿ ಹೇರೊಡಲ ಕೂರುಗುರದಿಂದ ಪಡುವಲ ಗಡಲ ತಡಿಯ ತರಣಿಯ ನೋಡಿ. ಕಡುಕೋಪದಲ್ಲಿ ಸದಬಡಿದು ರಕ್ಕಸನ ಕೆಡಹಿನಿಡಿಗರಳನು ಕೊರಳೆಡಿಯಲ್ಲಿ ಧರಿಸಿದ ಸಡಗರದ ದೈವ ಕಡುಗಲಿ ಭೂರ್ಭೂವ ವಿಜಯ ವಿಠ್ಠಲಪಾಲ್ಗಡಲೊಡೆಯಾ ಶರಣರ ವಡೆವೆ ವಡನೊಡನೆ || ೬ ||


ತಾಳ – ಆದಿ

ಉರಿಮಸೆಗೆ ಚತುರ್ದಶ ಧರಣಿ ತಲ್ಲಣಿಸಲುಪರಮೇಷ್ಟಿ ಹರಸುರರು ಸಿರಿದೇವಿಗೆ ಮೊರೆಯಿಡಲುಕರುಣದಿಂದಲಿ ತನ್ನ ಶರಣನ್ನ ಸಹಿತ ನಿನ್ನಚರಣಕ್ಕೆ ಎರಗಲು ಪರಮ ಶಾಂತನಾಗಿ ಹರಹಿದೆ ದಯವನ್ನು ಸುರರು ಕುಸುಮ ವರುಷ. ಗರಿಯಲು ಭೇರಿ ವಾದ್ಯ ಮೊರೆ ಉತ್ತರರೆ ಎನುತ ಪರಿಪರಿ ವಾಲಗ ವಿಸ್ತಾರದಿಂದ ಕೈಕೊಳ್ಳುತ್ತ ಮೆರೆದು ಸುರರುಪದ್ರ ಹರಿಸಿ ಬಾಲಕನ ಕಾಯ್ದೆಪರದೈವೆ ಗಂಭೀರಾತ್ಮ ವಿಜಯ ವಿಠ್ಠಲನಿಮ್ಮ ಚರಿತೆ ದುಷ್ಟರಿಗೆ ಭೀಕರವೋ ಸಜ್ಜನ ಪಾಲ || ೭ ||

ಪ್ರಹ್ಲಾದವರದ ಪ್ರಸನ್ನ ಕ್ಲೇಶಭಂಜನ್ನಮಹ ಹವಿಷೆ ವಿಜಯವಿಠ್ಠಲ ನರಮೃಗವೇಷಾ || ೮ ||

No comments:

Post a Comment